Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಆಹ್ವಾನ, ಯಾವೆಲ್ಲಾ ದಾಖಲೆಗಳು ಬೇಕು.? ಅರ್ಜಿ ಸಲ್ಲಿಸುವ ವಿಧಾನ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

Posted on June 4, 2023 By Kannada Trend News No Comments on ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಆಹ್ವಾನ, ಯಾವೆಲ್ಲಾ ದಾಖಲೆಗಳು ಬೇಕು.? ಅರ್ಜಿ ಸಲ್ಲಿಸುವ ವಿಧಾನ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

 

ಕೊನೆಗೂ ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 2ನೇ ತಾರೀಕಿನಂದು ಈ ವರ್ಷ ನಡೆದ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ಕೊಟ್ಟಿದ್ದ ಮಾತಿನಂತೆ ಐದು ಅಧಿಕೃತ ಗ್ಯಾರಂಟಿ ಕಾರ್ಡ್ ಯೋಜನೆಗಳಿಗೆ ಆದೇಶ ನೀಡಿದ್ದಾರೆ. ಎಲ್ಲಾ ಯೋಜನೆಗಳಿಗೆ ಇರುವ ಮಾರ್ಗಸೂಚಿಗಳು, ರೂಪರೇಷೆಗಳು ಮತ್ತು ಮಾನದಂಡಗಳನ್ನು ಕೂಡ ವಿವರವಾಗಿ ತಿಳಿಸಿ ಯಾವ ಯಾವ ಯೋಜನೆಗಳು ಯಾವೆಲ್ಲ ದಿನಾಂಕದಂದು ಲಾಂಚ್ ಆಗುತ್ತದೆ.

ಮತ್ತು ಯಾವೆಲ್ಲ ದಾಖಲೆಗಳನ್ನು ಫಲಾನುಭವಿಗಳು ಹೊಂದಿರಬೇಕು, ಯಾರು ಈ ಯೋಜನೆಗೆ ಅರ್ಹರಾಗಿರುತ್ತಾರೆ ಎನ್ನುವುದಕ್ಕೆ ಸಂಬಂಧಪಟ್ಟ ಹಾಗೆ ವಿವರವನ್ನು ಸಹ ತಿಳಿಸಿದ್ದಾರೆ. ಅಂತೆಯೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಆಹ್ವಾನ ಪ್ರಕ್ರಿಯೆ ಬಗ್ಗೆ ಕೂಡ ಮಾತನಾಡಿರುವ ಅವರು ಗೃಹಲಕ್ಷ್ಮಿ ಯೋಜನೆ ಬಗ್ಗೆ ಈ ಪ್ರಮುಖ ವಿಚಾರಗಳನ್ನು ಹಂಚಿಕೊಂಡಿದ್ದಾರೆ.

ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ರಾಜ್ಯದಾದ್ಯಂತ ಗೃಹಲಕ್ಷ್ಮಿ ಯೋಜನೆಯನ್ನು ಲಾಂಚ್ ಮಾಡಲಾಗುತ್ತದೆ. ಅಂದಿನಿಂದ ಪ್ರತಿ ತಿಂಗಳು 2000ರೂ. ಸಹಾಯಧನವು ಕುಟುಂಬ ನಿರ್ವಹಣೆಗಾಗಿ ಕುಟುಂಬದ ಒಡತಿಯ ಖಾತೆಗೆ ಹೋಗುತ್ತದೆ. ಈ ಯೋಜನೆಗೆ APL ಮತ್ತು BPL ಕಾರ್ಡ್ ಹೊಂದಿರುವ ಎಲ್ಲರೂ ಕೂಡ ಅರ್ಹರು.

ಒಂದೇ ಕುಟುಂಬದಲ್ಲಿ ಅತ್ತೆ, ಸೊಸೆ ಅಥವಾ ಹೆಚ್ಚು ಮಹಿಳೆಯರಿದ್ದರೆ ಆ ಕುಟುಂಬದಲ್ಲಿ ಕುಟುಂಬದ ಯಜಮಾನ ಯಾರು ಆಗಬೇಕು ಎನ್ನುವ ನಿರ್ಧಾರವನ್ನು ಕುಟುಂಬದ ತೀರ್ಮಾನಕ್ಕೆ ಬಿಟ್ಟಿರುತ್ತೇವೆ. 18 ವರ್ಷ ಪೂರೈಸಿದ ಯಾರು ಬೇಕಾದರೂ ಕುಟುಂಬದ ಯಜಮಾನ ಎಂದು ನೋಂದಾಯಿಸಿಕೊಂಡು ಅದಕ್ಕೆ ಪೂರಕವಾದ ದಾಖಲೆಗಳನ್ನು ಕೊಟ್ಟು ಅರ್ಜಿ ಸಲ್ಲಿಸಬಹುದು.

ಈಗಾಗಲೇ ಸಾಮಾಜಿಕ ಭದ್ರತಾ ಪಿಂಚಣಿಯನ್ನು ಪಡೆಯುತ್ತಿರುವ ಮಹಿಳೆಯರಿದ್ದರೆ ಅಂದರೆ ವಿಧವೇ ವೇತನ, ಅಂಗವಿಕಲ ವೇತನ ಅಥವಾ ವೃದ್ಯಾಪ್ಯ ವೇತನವನ್ನು ಗೃಹಲಕ್ಷ್ಮಿಯರು ಪಡೆಯುತ್ತಿದ್ದರು ಕೂಡ ಅವರು ಸಹ ಗೃಹಲಕ್ಷ್ಮಿ ಯೋಜನೆಯ 2000ರೂ. ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಸಂಬಂಧಪಟ್ಟ ಹಾಗೆ ಸಾಕಷ್ಟು ಸಿದ್ಧತೆಯನ್ನು ಮಾಡಿಕೊಳ್ಳಲಾಗಿದ್ದು ಇದರ ಸಾಧಕ ಬಾಧಕಗಳ ವಿವರವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಆಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳೇ ಜೂನ್ 15 ರಿಂದ ಜುಲೈ 15ನೇ ತಾರೀಖಿನವರೆಗೆ ಗೃಹಲಕ್ಷ್ಮಿ ಯೋಜನೆಯ ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ.

ನಂತರ ಅವುಗಳ ಪರಿಶೀಲನೆ ಕೆಲಸವನ್ನು ಜುಲೈ 15 ರಿಂದ ಆಗಸ್ಟ್ 15 ರವರೆಗೆ ನಡೆಸಿ ಅರ್ಹ ಫಲಾನುಭವಿಗಳಿಗೆ ಆಗಸ್ಟ್ 15ರಂದು ನೇರ ವರ್ಗಾವಣೆ ಮೂಲಕ ಅವರ ಖಾತೆಗೆ ಹಣ ಜಮೆ ಮಾಡುತ್ತಿವೆ ಎಂದು ತಿಳಿಸಿದ್ದಾರೆ. ಇದಕ್ಕಾಗಿ ಫಲಾನುಭವಿಯೋ ಬ್ಯಾಂಕ್ ಅಕೌಂಟ್ ಹೊಂದಿರುವುದು ಕಡ್ಡಾಯ ಎನ್ನುವುದನ್ನು ಕೂಡ ಉಲ್ಲೇಖಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಆಗಬೇಕು ಎಂದರೆ ಕುಟುಂಬದ ಒಡತಿಯು ಕೆಲ ಪ್ರಮುಖ ದಾಖಲೆಗಳನ್ನು ಹೊಂದಿರಬೇಕು. ಅವುಗಳು ಯಾವುದೆಂದರೆ, ಕಡ್ಡಾಯವಾಗಿ ಆಧಾರ್ ಕಾರ್ಡ್, ಬ್ಯಾಂಕ್ ಅಕೌಂಟ್ ಹೊಂದಿರುವುದು ಮಾತ್ರ ಅಲ್ಲದೆ ಅವರ ಬ್ಯಾಂಕ್ ಅಕೌಂಟ್ ಝೀರೋ ಅಕೌಂಟ್ ಅಥವಾ ಸೇವಿಂಗ್ ಅಕೌಂಟ್ ಆಗಿರಬೇಕು. ಜಂಟಿ ಅಕೌಂಟ್ ಆಗಿದ್ದರೆ ಅದು ಮಾನ್ಯ ವಾಗುವುದಿಲ್ಲ. NCPI ಲಿಂಕ್ ಆಗಿರಬೇಕು ಅಂದರೆ ಆ ಅಕೌಂಟಿಗೆ ಆಧಾರ್ ಕಾರ್ಡ್ ಕೂಡ ಲಿಂಕ್ ಆಗಿರಬೇಕು ಇದು ಕೂಡ ಕಡ್ಡಾಯ ಎಂದು ತಿಳಿಸಿದ್ದಾರೆ.

ಇತ್ತೀಚಿನ ಭಾವಚಿತ್ರ ಮತ್ತು ಮೊಬೈಲ್ ಸಂಖ್ಯೆಯನ್ನು ಕೂಡ ಅರ್ಜಿ ಸಲ್ಲಿಸುವ ವೇಳೆ ಕೇಳಬಹುದು. ಶೀಘ್ರದಲ್ಲಿಯೇ ಆನ್ಲೈನ್ ಮತ್ತು ಆಫ್ಲೈನ್ ಮೂಲಕ ಹೇಗೆ ಅರ್ಜಿ ಸಲ್ಲಿಸಬಹುದು ಎನ್ನುವ ಬಗ್ಗೆ ಪ್ರತ್ಯೇಕ ಅಧಿಸೂಚನೆ ಸರ್ಕಾರದಿಂದ ಹೊರ ಬೀಳಲಿದೆ. ಆದ್ದರಿಂದ ಎಲ್ಲಾ ಮಹಿಳೆಯರು ಈ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

*ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಲಕ್ಷ್ಮಿ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ. ಈ ಕೂಡಲೇ ಕರೆ ಮಾಡಿ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ. 9845866654*

Useful Information
WhatsApp Group Join Now
Telegram Group Join Now

Post navigation

Previous Post: ಕೃಷಿ ಚಟುವಟಿಕೆಗೆ ಖರೀದಿ ಮಾಡಿದ ಯಂತ್ರೋಪಕರಣಗಳ ಸಾಲ ಮನ್ನ ಯೋಜನೆಗೆ ಮುಂದಾದ ಸರ್ಕಾರ.!
Next Post: ಇಂದು ಜೇಷ್ಠ ಹುಣ್ಣಿಮೆ, ಈ ದಿನ ಈ ರೀತಿ ಪೂಜೆ ಮಾಡಿ ವ್ರತ ಮಾಡಿದ್ರೆ ವಿಶೇಷ ವಸ್ತುಗಳನ್ನು ದಾನ ನೀಡಿದರೆ ನಿಮ್ಮ ಎಲ್ಲಾ ಕಷ್ಟಗಳು ಪರಿಹಾರ ಆಗಿ ಗಂಡನ ಆಯಸ್ಸು ಹೆಚ್ಚುತ್ತೆ.!

Leave a Reply Cancel reply

Your email address will not be published. Required fields are marked *

Copyright © 2025 Kannada Trend News.


Developed By Top Digital Marketing & Website Development company in Mysore