Home Useful Information ಬಾಡಿಗೆ ಮನೆಯಲ್ಲಿ ವಾಸ ಮಾಡುತಿದ್ದವರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ ಹರ್ಷ ವ್ಯಕ್ತ ಪಡಿಸಿದ ಬಾಡಿಗೆದಾರರು.!

ಬಾಡಿಗೆ ಮನೆಯಲ್ಲಿ ವಾಸ ಮಾಡುತಿದ್ದವರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ ಹರ್ಷ ವ್ಯಕ್ತ ಪಡಿಸಿದ ಬಾಡಿಗೆದಾರರು.!

0
ಬಾಡಿಗೆ ಮನೆಯಲ್ಲಿ ವಾಸ ಮಾಡುತಿದ್ದವರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ ಹರ್ಷ ವ್ಯಕ್ತ ಪಡಿಸಿದ ಬಾಡಿಗೆದಾರರು.!

 

 

ಪ್ರಧಾನಿ ಮೋದಿ(Prime Minister Modi) ನೇತೃತ್ವದಲ್ಲಿ ಕೇಂದ್ರ ಸರ್ಕಾರ(Central Govt) ಹೊಸ ಯೋಜನೆಯನ್ನು ಜಾರಿಗೆ ತರಲಿದೆ. ನಗರಗಳಲ್ಲಿ ಬಾಡಿಗೆ ಮನೆಗಳಲ್ಲಿ ವಾಸಿಸುವವರಿಗೆ ಸ್ವಂತ ಮನೆ ನಿರ್ಮಿಸಿಕೊಳ್ಳಲು ಸಹಾಯ ಮಾಡಲು ಸರ್ಕಾರ ಹೊಸ ಯೋಜನೆಯನ್ನು ಪ್ರಾರಂಭಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ(ಆಗಸ್ಟ್‌ 15) ಹೇಳಿದ್ದಾರೆ.

ಈ ಯೋಜನೆಯು ಮಧ್ಯಮ ವರ್ಗದ ಜನರಿಗೆ ದೊಡ್ಡ ಪರಿಹಾರವನ್ನು ತರುತ್ತದೆ. ನೀವೂ ಮಧ್ಯಮ ವರ್ಗಕ್ಕೆ ಸೇರಿದವರಾಗಿದ್ದು, ಮನೆ ಖರೀದಿಸಲು ಇಚ್ಛಿಸುವವರಾಗಿದ್ದರೆ, ಕೇಂದ್ರ ಸರ್ಕಾರ ನಿಮಗಾಗಿ ಒಂದು ಗುಡ್ ನ್ಯೂಸ್ ನೀಡಿದೆ. ಇತ್ತೀಚೆಗಷ್ಟೇ ಮೋದಿ ಸರ್ಕಾರ ಈ ಮಹತ್ವದ ಘೋಷಣೆ ಮಾಡಿದೆ.

ಉದೋಗಾಂಕ್ಷಿಗಳ ಗಮನಕ್ಕೆ ʻBECILʼನಲ್ಲಿ 42,000 ವೇತನದ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ

ಅದರಂತೆ ಸರ್ಕಾರ ಹೊಸ ಯೋಜನೆ ತರಲು ಸಿದ್ಧತೆ ನಡೆಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಬಹಿರಂಗಪಡಿಸಿದ್ದಾರೆ. ಬಾಡಿಗೆಗೆ ಇರುವ ಮಧ್ಯಮ ವರ್ಗದವರಿಗಾಗಿಯೇ ವಿಶೇಷ ಹೊಸ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ತಿಳಿಸಿದರು. ಈ ಯೋಜನೆಯಿಂದ ಹಲವಾರು ಜನರಿಗೆ ಅನುಕೂಲವಾಗಲಿದೆ ಎಂದು ಹೇಳಬಹುದು ಎಂದರು.

ನಗರ ಪ್ರದೇಶಗಳಲ್ಲಿ ಮನೆ ಖರೀದಿಸಲು ಬಯಸುವ ಜನರಿಗೆ ಕೇಂದ್ರವು ಹೊಸ ಯೋಜನೆಯೊಂದಿಗೆ ಬರುತ್ತಿದೆ. ಬ್ಯಾಂಕ್ ಸಾಲದ ಬಡ್ಡಿಯಲ್ಲಿ ಪರಿಹಾರ ನೀಡಲು ಸರ್ಕಾರ ಹೊಸ ಯೋಜನೆ ತರಲು ಹೊರಟಿದೆ. ಪ್ರಧಾನಿ ಮೋದಿ ಅವರು ತಮ್ಮ 77ನೇ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ. ನಗರ ಪ್ರದೇಶಗಳಲ್ಲಿ ಬಾಡಿಗೆ ಪಡೆಯುವ ಮಧ್ಯಮ ವರ್ಗದ ಜನರಿಗಾಗಿ ಹೊಸ ಯೋಜನೆ ರೂಪಿಸಲಾಗುತ್ತಿದೆ ಎಂಬ ಅಂಶ ಬಹಿರಂಗವಾಗಿದೆ.

BPL ಕಾರ್ಡ್‌‌ ಇದ್ದವರಿಗೆ ಬಿಗ್‌ ಶಾ-ಕ್‌ ಮನೆ ಮನೆ ಸರ್ವೇ ಕೆಲಸ ಶುರು ಮಾಡಿದ ಸರ್ಕಾರ.! ರದ್ದಾಗಲಿದೆ ಇಂತಹ ಕುಟುಂಬದ ರೇಷನ್ ಕಾರ್ಡ್

ಕೆಂಪು ಕೋಟೆಯ ಆವರಣದಿಂದ ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಪ್ರಧಾನಿ ಮೋದಿ ಅವರು, “ನಗರಗಳಲ್ಲಿ ವಾಸಿಸುವ ದುರ್ಬಲ ವರ್ಗಗಳು ಬಹಳಷ್ಟು ಸಮಸ್ಯೆಗಳನ್ನು ಎದುರಿಸುತ್ತಿವೆ. ನಗರಗಳಲ್ಲಿ ವಾಸಿಸುವ ಮಧ್ಯಮ ವರ್ಗದ ಕುಟುಂಬಗಳು ಸ್ವಂತ ಮನೆ ಖರೀದಿಸುವ ಕನಸು ಕಾಣುತ್ತಿದ್ದಾರೆ.

ಆದರೆ, ಬಾಡಿಗೆ ಮನೆಗಳು, ಕೊಳೆಗೇರಿಗಳು, ಗುಡಿಸಲುಗಳು ಮತ್ತು ಅನಧಿಕೃತ ಕಾಲೋನಿಗಳಲ್ಲಿ ವಾಸಿಸುವ ಕುಟುಂಬಗಳಿಗೆ ಅನುಕೂಲವಾಗುವಂತಹ ಹೊಸ ಯೋಜನೆಯನ್ನು ಮುಂಬರುವ ವರ್ಷಗಳಲ್ಲಿ ನಾವು ತರಲಿದ್ದೇವೆ. ಅವರು ತಮ್ಮ ಸ್ವಂತ ಮನೆಗಳನ್ನು ನಿರ್ಮಿಸಲು ಬಯಸಿದರೆ, ನಾವು ಅವರಿಗೆ ಬಡ್ಡಿದರದಲ್ಲಿ ಪರಿಹಾರ ಮತ್ತು ಬ್ಯಾಂಕ್‌ಗಳಿಂದ ಸಾಲವನ್ನು ನೀಡುತ್ತೇವೆ ಅದು ಅವರಿಗೆ ಲಕ್ಷ ರೂಪಾಯಿಗಳನ್ನು ಉಳಿಸಲು ಸಹಾಯ ಮಾಡುತ್ತದೆ” ಎಂದಿದ್ದಾರೆ.

ರಾಜ್ಯದ ಜನತೆಗೆ ಗುಡ್ ನ್ಯೂಸ್ ಈ 7 ಜಿಲ್ಲೆ ಜನರಿಗೆ ಕಡಿಮೆ ಬೆಲೆಯಲ್ಲಿ ಮನೆ ಕಟ್ಟಲು ಸೈಟ್ ಸಿಗಲಿದೆ, C.M ಸಿದ್ದರಾಮಯ್ಯರಿಂದ ಅಧಿಕೃತ ಘೋಷಣೆ.!

ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ)(Pradhan Mantri Awas Yojana) ವಿಸ್ತರಣೆಯನ್ನು ಸರ್ಕಾರ ಇತ್ತೀಚೆಗೆ ಘೋಷಿಸಿತು. ಮುಂದಿನ ವರ್ಷ ಡಿಸೆಂಬರ್ ವರೆಗೆ ಅಂದರೆ 2024ರ ಅಂತ್ಯದವರೆಗೆ ಈ ಯೋಜನೆ ಲಭ್ಯವಾಗಲಿದೆ ಎಂಬ ಮಾಹಿತಿ ಇದೆ. ಇದರಿಂದ ಎಷ್ಟೋ ಮಂದಿಗೆ ಸಮಾಧಾನವಾಗುತ್ತದೆ ಎನ್ನಬಹುದು. ಎಲ್ಲಕ್ಕಿಂತ ಮುಖ್ಯವಾಗಿ, ಸ್ವಂತ ಮನೆ ಖರೀದಿಸಲು ಬಯಸುವವರಿಗೆ ಲಾಭವಾಗುತ್ತದೆ.

ಸಾಮಾನ್ಯವಾಗಿ, ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) 2022 ಮಾರ್ಚ್ 31 ರಂದು ಕೊನೆಗೊಳ್ಳಬೇಕಿತ್ತು. ಆದರೆ, ಈಗ ಸರ್ಕಾರವು ಈ ಗಡುವನ್ನು ವಿಸ್ತರಿಸುತ್ತಿದೆ. ಗೃಹ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ಕೌಶಲ್ ಕಿಶೋರ್ ಇತ್ತೀಚೆಗೆ ಲೋಕಸಭೆಯಲ್ಲಿ ಇದನ್ನು ಬಹಿರಂಗಪಡಿಸಿದ್ದಾರೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) 2015 ರಿಂದ ಜಾರಿಗೆ ಬಂದಿದೆ ಎಂದು ಅವರು ಹೇಳಿದರು. ಈ ಯೋಜನೆಯಡಿ ಅರ್ಹರಿಗೆ ಕನಿಷ್ಠ ಸೌಲಭ್ಯಗಳೊಂದಿಗೆ ಮನೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

LEAVE A REPLY

Please enter your comment!
Please enter your name here