Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

ಅಡುಗೆ ಮನೆ ಟಿಪ್ಸ್.!

Posted on March 23, 2024 By Kannada Trend News No Comments on ಅಡುಗೆ ಮನೆ ಟಿಪ್ಸ್.!

ಅಡುಗೆ ಟಿಪ್ಸ್ ಅಡುಗೆ ಮನೆಯಲ್ಲಿ ಹಾಕಬೇಕಾದ ಶ್ರಮವನ್ನು ಕಡಿಮೆ ಮಾಡುತ್ತದೆ. ಹಾಗೂ ಆಹಾರದ ರುಚಿಯನ್ನು ಹೆಚ್ಚಿಸುತ್ತದೆ. ಸಾರಿಗೆ ಉಪ್ಪು ಜಾಸ್ತಿ, ಆದರೆ ಅದನ್ನು ಹೇಗೆ ಸರಿಪಡಿಸಬಹುದು. ಟೊಮೆಟೊ ಸಿಪ್ಪೆ ಬಿಡಿಸಬೇಕು ಎಂದರೆ ಯಾವ ಕೆಲವು ವಿಧಾನಗಳನ್ನು ಅನುಸರಿಸಬಹುದು ಹೀಗೆ ಈ ವಿಷಯಕ್ಕೆ ಸಂಬಂಧಿಸಿದ ಹಲವಾರು ಮಾಹಿತಿಗಳನ್ನು ಈ ಕೆಳಗೆ ತಿಳಿಯೋಣ.

* ಅಡುಗೆ ಮಾಡುವಾಗ ಕೆಲವು ವಿಷಯಗಳತ್ತ ಹೆಚ್ಚಿನ ಗಮನ ಹರಿಸಿ ದರೆ ಕೆಲವು ಖಾದ್ಯ ಇನ್ನಷ್ಟು ರುಚಿಯಾಗುತ್ತದೆ ಹಾಗೂ ಅಡುಗೆ ಕೆಲಸವೂ ಸುಲಭವಾಗುತ್ತದೆ.
* ಸಾರಿಗೆ ಉಪ್ಪು ಹೆಚ್ಚಾದರೆ ಕಬ್ಬಿಣದ ಸೌಟನ್ನು ಒಲೆಯ ಮೇಲಿಟ್ಟು ಅದು ಕೆಂಪಗೆ ಕಾದ ಮೇಲೆ ಸಾರಿನಲ್ಲಿ ಅದ್ದಿದರೆ ಉಪ್ಪು ಸರಿಯಾಗುತ್ತದೆ
* ದ್ರಾಕ್ಷಿ, ಟೊಮೆಟೊ, ಕಿತ್ತಳೆ ಹಣ್ಣುಗಳನ್ನು ಕುದಿಯುವ ನೀರಿನಲ್ಲಿ ಎರಡು ನಿಮಿಷಗಳ ಕಾಲ ಇಟ್ಟು ನಂತರ ತಣ್ಣೀರಿಗೆ ಹಾಕಿದರೆ ಸಿಪ್ಪೆ ಯನ್ನು ಸುಲಭವಾಗಿ ಸುಲಿಯಬಹುದು.

* ಗಾಜಿನ ಲೋಟಕ್ಕೆ ಬಿಸಿ ಬಿಸಿ ಕಾಫಿ ಅಥವಾ ಟೀ ಹಾಕುವ ಮುಂಚೆ ಆ ಲೋಟದಲ್ಲಿ ಒಂದು ಚಮಚ ಹಾಕಿಟ್ಟರೆ ಲೋಟಕ್ಕೆ ಬಗ್ಗಿಸಿದ ಪೇಯದ ಬಿಸಿಯನ್ನು ಆ ಚಮಚ ಸಾಕಷ್ಟು ತೆಗೆದುಕೊಳ್ಳುವ ಕಾರಣ ಆ ಲೋಟ ಬಿಸಿಗೆ ಒಡೆಯುವುದಿಲ್ಲ.
* ಕಾಫಿಗೆ ಒಂದು ಚಿಟಿಕೆ ಉಪ್ಪು ಹಾಕಿ ಕಲಸಿ ಕುಡಿದರೆ ಕಾಫಿಯ ರುಚಿ ಹೆಚ್ಚುತ್ತದೆ.
* ಆಲೂಗೆಡ್ಡೆ ಬೇಯಿಸಿದ ನೀರಿನಿಂದ ಬೆಳ್ಳಿ ಮತ್ತು ಇತರ ಪಾತ್ರೆಗಳನ್ನು ಅಚ್ಚುಕಟ್ಟಾಗಿ ತೊಳೆಯಬಹುದು.

* ಟೀ ಸೊಪ್ಪನ್ನು ಗಾಜಿನ ಜಾಡಿಗಳಲ್ಲಿ ಹಾಕಿಟ್ಟರೆ ಟೀ ರುಚಿ ಹೆಚ್ಚುತ್ತದೆ. ಟೀ ಕುದಿಯುವಾಗ ಕಿತ್ತಳೆ ಸಿಪ್ಪೆ ಅಥವಾ ಏಲಕ್ಕಿ ಸಿಪ್ಪೆ ಹಾಕಿದರೆ ವಿಶಿಷ್ಟ
ರುಚಿ ಸಿಗುತ್ತದೆ.
* ತೊಗರಿ ಬೇಳೆ ಬೇಯಲು ಇಡುವಾಗ ಅದರ ಜೊತೆ ಒಂದು ಚೂರು ತೆಂಗಿನಕಾಯಿ ಹಾಕಿದರೆ ಬೇಳೆ ಬೇಗ ಮತ್ತು ಚೆನ್ನಾಗಿ ಬೇಯುತ್ತದೆ.

* ಕಡಗೋಲನ್ನು ಬಿಸಿ ನೀರಿನಲ್ಲಿ ಹಾಕಿ ತೆಗೆದು ಮಜ್ಜಿಗೆ ಕಡೆದರೆ ಅದಕ್ಕೆ ಬೆಣ್ಣೆ ಅಂಟುವುದಿಲ್ಲ. ಮಳೆಗಾಲದಲ್ಲಿ ಮಿಕ್ಸಿಯಲ್ಲಿ ಬೆಣ್ಣೆ ತೆಗೆಯುವಾಗ ಬಿಸಿ ನೀರು ಮತ್ತು ಬೇಸಿಗೆಯಲ್ಲಿ ತಂಪು ನೀರು ಹಾಕಿದರೆ ಬೆಣ್ಣೆ ಸುಲಭವಾಗಿ ಬರುತ್ತದೆ.
* ಹಾಲು ಕಾಯಿಸುವಾಗ ಆ ಪಾತ್ರೆಯಲ್ಲಿ ಒಂದು ಸ್ಟೀಲ್ ಸೌಟು ಹಾಕಿಟ್ಟರೆ ಹಾಲು ಉಕ್ಕಿ ಚೆಲ್ಲುವುದಿಲ್ಲ. ಸೊಪ್ಪು ಬೇಯಿಸುವಾಗ ಪಾತ್ರೆ ಮೇಲೆ ಮುಚ್ಚಳ ಇಡಬೇಡಿ. ಇದರಿಂದ ಸೊಪ್ಪಿನ ಹಸಿರು ಬಣ್ಣ ಹಾಗೆಯೇ ಇರುತ್ತದೆ.

* ಕಾಲಿಫ್ಲವರ್‌ಗೆ ಸ್ವಲ್ಪ ವಿನಿಗರ್ ಬೆರೆಸಿ ಬೇಯಿಸಿದರೆ ಅದರ ಬಿಳಿ ಬಣ್ಣ ಹಾಗೆಯೇ ಇರುತ್ತದೆ. ಮಸಾಲೆ ಅಥವಾ ಕೊಬ್ಬರಿ ರುಬ್ಬುವಾಗ ಸ್ವಲ್ಪ ಉಪ್ಪು ಹಾಕಿದರೆ ಕೊಬ್ಬರಿ ಬೇಗ ನುಣ್ಣಗಾಗುತ್ತದೆ ಮತ್ತು ಮೈ ಮೇಲೆ ಸಿಡಿಯುವುದಿಲ್ಲ.
* ಪಲಾವ್ ಮಾಡುವ ಮೊದಲು ಬಾಸುಮತಿ ಅಕ್ಕಿಯನ್ನು ಸ್ವಲ್ಪ ಹೊತ್ತು ನೀರಿನಲ್ಲಿ ನೆನೆಸಿಟ್ಟು ನೀರು ಬಸಿದು ಮೂರ್ನಾಲ್ಕು ನಿಮಿಷ ಹಾಗೆಯೇ ಬಿಟ್ಟು ನಂತರ ಪಲಾವ್ ಮಾಡಿದರೆ ಅನ್ನ ಮುದ್ದೆಯಾಗದೆ ಉದುರುದುರಾಗಿರುತ್ತದೆ.

* ದೋಸೆ ಅಕ್ಕಿಗೆ ಸ್ವಲ್ಪ ಹೆಸರುಬೇಳೆ ಹಾಕಿ ರುಬ್ಬಿದರೆ ದೋಸೆ ಮೃದು ವಾಗುತ್ತದೆ. ಬಾಳೆಕಾಯಿಯನ್ನು ಹೆಚ್ಚುವಾಗ ಕೈಗಳಿಗೆ ಮಜ್ಜಿಗೆ ಸವರಿದರೆ ಕೈ ಕಪ್ಪಾಗುವುದಿಲ್ಲ.
* ಗಾಳಿ ಬರುವ ಸ್ಥಳದಲ್ಲಿ ಈರುಳ್ಳಿ ಹೆಚ್ಚಿದರೆ ಕಣ್ಣೀರು ಬರುವುದನ್ನು ತಪ್ಪಿಸಬಹುದು. ಕೈಯೆಲ್ಲಾ ಸೀಮೆಎಣ್ಣೆ ವಾಸನೆಯಿದ್ದರೆ ತಿಳಿ ಮಜ್ಜಿಗೆ ಯಿಂದ ಕೈಗಳನ್ನು ತೊಳೆಯಿರಿ.

* ಬೆಳ್ಳಿ ಪಾತ್ರೆಗಳನ್ನು ವಿಭೂತಿಯಿಂದ ಮತ್ತು ಸ್ಟೀಲ್ ಪಾತ್ರೆಗಳನ್ನು ಗೋಧಿ ಹಿಟ್ಟಿನಿಂದ ತಿಕ್ಕಿ ತೊಳೆದರೆ ಅವುಗಳಲ್ಲಿ ಅಂಟಿದ ಜಿಡ್ಡು ಹೋಗಿ ಪಾತ್ರೆಗಳು ಹೊಳೆಯುತ್ತವೆ.
* ಕೈಗಳಿಗೆ ಕೊಬ್ಬರಿ ಎಣ್ಣೆ ಹಚ್ಚಿಕೊಂಡು ಹಸಿ ಮೆಣಸಿನಕಾಯಿಗಳನ್ನು ಹೆಚ್ಚಿದರೆ ಕೈಗಳು ಉರಿಯುವುದಿಲ್ಲ. ಸೀಮೆ ಬದನೆಕಾಯಿ ಹೆಚ್ಚುವಾಗ ಅಂಗೈಗೆ ಕೊಬ್ಬರಿ ಎಣ್ಣೆ ಹಚ್ಚಿದರೆ ಕೈಯಲ್ಲಿ ಅಂಟಿನ ಸಿಪ್ಪೆ ಏಳುವುದಿಲ್ಲ.

Useful Information

Post navigation

Previous Post: ಹಿಂದಿನ ಕಾಲದಲ್ಲಿ ಆರೋಗ್ಯಕ್ಕಾಗಿ ಅಜ್ಜಿ ಮಾಡುತ್ತಿದ್ದ ಅದ್ಭುತ ಮನೆಮದ್ದುಗಳು.!
Next Post: ಮಾರ್ಚ್ 25 ಹೋಳಿ ಹುಣ್ಣಿಮೆ ದಿನದಂದು ಚಂದ್ರಗ್ರಹಣ, ಪರಿಣಾಮ ಈ 5 ರಾಶಿಯವರಿಗೆ ರಾಜಯೋಗ ಖಂಡಿತ.!

Leave a Reply Cancel reply

Your email address will not be published. Required fields are marked *

Copyright © 2025 Kannada Trend News.


Developed By Top Digital Marketing & Website Development company in Mysore