ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ವೇದಿಕೆ ಮೇಲೆ ಪುನೀತ್ ಫೋಟೋ ಕಂಡ ಕೂಡಲೇ ಗಳಗಳನೆ ಕಣ್ಣೀರು ಹಾಕಿದ ಕಿಚ್ಚ ಸುದೀಪ್.

ನಟ ಕಿಚ್ಚ ಸುದೀಪ್ ಪುನೀತ್ ಅವರ ಜೊತೆ ಒಳ್ಳೆ ಬಾಂಧವ್ಯವನ್ನು ಹೊಂದಿದ್ದರು ಕಿಚ್ಚ ಸುದೀಪ್ ಅವರು ಸಿನಿಮಾ ಇಂಡಸ್ಟ್ರಿಯಲ್ಲಿ ತುಂಬಾನೇ ಹೆಸರು ಮಾಡಿದ್ದಾರೆ ಅವರು ಮಾಡಿದ ಸಾಧನೆ ಹಾಗೂ ಅವರು ನಮ್ಮ ಕನ್ನಡ ಸಿನಿಮಾಗೆ ತಂದಿರುವ ಕೀರ್ತಿ ತುಂಬಾನೇ ಅಪಾರ ಇನ್ನು ನಮ್ಮ ಪುನೀತ್ ರಾಜಕುಮಾರ್ ಅವರು ನಮ್ಮನ್ನೆಲ್ಲ ಬಿಟ್ಟು ಹೋಗಿ ತುಂಬಾನೇ ದಿನಗಳು ಕಳೆದವು ಆದರೆ ಅವರು ನೆನಪುಗಳು ಮಾತ್ರ ನಮ್ಮನ್ನು ಬಿಟ್ಟು ಹೋಗಿಲ್ಲ ಅವರು ನನ್ನ ನೆನೆಸಿಕೊಂಡು ತುಂಬಾನೇ ಜನ ಈಗಲೂ ಅಳುತ್ತಾರೆ. ವಿಕ್ರಾಂತ್‌ ರೋಣ ಪ್ರಮೋಷನ್‌ನಲ್ಲಿ ನಟ ಕಿಚ್ಚ ಸುದೀಪ್‌ ಸದ್ಯ ಸಖತ್‌ ಬ್ಯುಸಿಯಾಗಿದ್ದಾರೆ.

ಜೀ ಕನ್ನಡ ವಾಹಿನಿಯ ಜನಪ್ರಿಯ ರಿಯಾಲಿಟಿ ಶೋ ʻಡ್ಯಾನ್ಸ್‌ ಕರ್ನಾಟಕ ಡ್ಯಾನ್ಸ್‌ʼ ವೇದಿಕೆಯ ಮೇಲೆ ಕಿಚ್ಚ ಸುದೀಪ್ ಕಾಣಿಸಿಕೊಂಡಿದ್ದಾರೆ. ಅಲ್ಲದೇ ನಟ ಶಿವರಾಜ್‌ ಕುಮಾರ್‌ ಜೊತೆ ಹೆಜ್ಜೆ ಹಾಕಿದ್ದಾರೆ ಜುಲೈ 28 ರಂದು ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ರಿಲೀಸ್ ಆಗುತ್ತಿದೆ. ಬಿಡುಗಡೆ ದಿನಾಂಕ ಸನಿಹವಾಗುತ್ತಿದ್ದಂತೆ ಪ್ರಮೋಷನ್‌ ಕಾರ್ಯ ಚುರುಕುಗೊಳಿಸಿದ್ದಾರೆ ಬೆಂಗಳೂರು, ಮುಂಬೈ, ಹೈದರಾಬಾದ್, ಚೆನ್ನೈ, ಕೊಚ್ಚಿ ಸೇರಿದಂತೆ ಹಲವು ಕಡೆ ಸುದೀಪ್ ಹಾಗೂ ಚಿತ್ರತಂಡ ಸಿನಿಮಾ ಪ್ರಚಾರ ಮಾಡಿ ಬಂದಿದ್ದಾರೆ.

https://youtu.be/n7nAYoLqupc

ಶಿವರಾಜ್​ಕುಮಾರ್ ಅವರು ಈ ಬಾರಿ ‘ಡಿಕೆಡಿ 6’ಗೆ ಜಡ್ಜ್​ ಆಗಿರುವುದು ವಿಶೇಷ. ರಕ್ಷಿತಾ ಕೂಡ ಜಡ್ಜ್​ ಸ್ಥಾನದಲ್ಲಿ ಇದ್ದಾರೆ. ಈಗ ಇವರ ಜತೆ ಸುದೀಪ್ ಕೂಡ ಸೇರಿಕೊಂಡಿದ್ದಾರೆ.‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ 6’ ಅನೇಕ ಟ್ಯಾಲೆಂಟ್​ಗಳಿಗೆ ವೇದಿಕೆ ಆಗಿದೆ. ಸಾಕಷ್ಟು ಡ್ಯಾನ್ಸರ್​ಗಳು ಇಲ್ಲಿಗೆ ಆಗಮಿಸಿ ತಮ್ಮ ಕಲೆಯನ್ನು ತೋರಿಸಿದ್ದಾರೆ ಹಲವು ಸಿನಿಮಾಗಳಲ್ಲಿ ಬ್ಯುಸಿ ಇರುವ ಶಿವರಾಜ್​ಕುಮಾರ್ ಅವರು ಈ ಬಾರಿ ‘ಡಿಕೆಡಿ-6’ ಗೆ ಜಡ್ಜ್​ ಆಗಿರುವುದು ವಿಶೇಷ. ರಕ್ಷಿತಾ ಕೂಡ ಜಡ್ಜ್​ ಸ್ಥಾನದಲ್ಲಿ ಇದ್ದಾರೆ. ಈಗ ಇವರ ಜತೆ ಸುದೀಪ್ ಕೂಡ ಸೇರಿಕೊಂಡಿದ್ದಾರೆ. ಬಾಲ್ಯದಿಂದಲೂ ಪುನೀತ್​ ಜೊತೆ ಗೆಳೆತನ ಹೊಂದಿದ್ದ ಕಿಚ್ಚ ಸುದೀಪ್​ ಅವರನ್ನು ನೆನಪಿಸಿಕೊಳ್ಳುತ್ತಾನೆ ಇರುತ್ತಾರೆ. ಸುಮಾರು ಕಾರ್ಯಕ್ರಮಗಳಲ್ಲಿ ಅವರಿಗೆ ಗೌರವವನ್ನು ಸಲ್ಲಿಸುತ್ತಾರೆ ಹಾಗೂ ಸುಮಾರು ವೇದಿಕೆಯಲ್ಲಿ ಕೂಡ ಕೊಡುತ್ತಾರೆ. ಈಗ ಜೀ ಕನ್ನಡದಲ್ಲಿ ನಡೆಯುತ್ತಿರುವ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ನಲ್ಲಿ ಅಪ್ಪು ಅವರಿಗೆ ಗೌರವ ಸಲ್ಲಿಸಿದ್ದಾರೆ ಅದು ಸುದೀಪಿನ ನೇತೃತ್ವದಲ್ಲಿ.

ಅವರ ಫೋಟೋ ಹಾಕಿದ ಕೂಡಲೇ ಸುದೀಪ್ ಅವರ ಕಣ್ಣೀರು ಬರಲು ಶುರುವಾಯಿತು.ನಂತರ ಅವರಿಗೆ ಇಷ್ಟವಾದಂತ ಹಾಡು ಕೂಡ ಹಾಡಿದರು. ಸುದೀಪ್ ಹಾಗೂ ಶಿವರಾಜ್​ಕುಮಾರ್ ಅವರು ಜೋಗಿ ಪ್ರೇಮ್ ನಿರ್ದೇಶನದ ‘ದಿ ವಿಲನ್’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಈ ಕಾರಣಕ್ಕೂ ಇವರ ನಡುವೆ ಒಳ್ಳೆಯ ಫ್ರೆಂಡ್​ಶಿಪ್ ಬೆಳೆದಿದೆ. ಇನ್ನು ವಿಕ್ರಾಂತರೋಣದಾಖಲೆ ಮೇಲೆ ದಾಖಲೆ ಬರೆಯುತ್ತಿದೆ. ರಾ ರಕ್ಕಮ್ಮತುಂಬಾನೆ ಫೇಮಸ್ ಆಗಿದೆ ಎಲ್ಲರ ಮನೆ ಮಾತು ಕೂಡ ಆಗಿದೆ. ‘ವಿಕ್ರಾಂತ್ ರೋಣ’ ಚಿತ್ರವನ್ನು ಜಾಕ್ ಮಂಜು ನಿರ್ಮಾಣ ಮಾಡಿದ್ದು ಅನೂಪ್ ಭಂಡಾರಿ ನಿರ್ದೇಶನ ಮಾಡಿದ್ದಾರೆ. ಬಾಲಿವುಡ್​ನ ಜಾಕ್ವೆಲಿನ್ ಫರ್ನಾಂಡಿಸ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಕಿಚ್ಚ ಸುದೀಪ್ ಅವರು ‘ವಿಕ್ರಾಂತ್​ ರೋಣ’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ. ಈ ಸಿನಿಮಾ ಬಗ್ಗೆ ಅವರಿಗೆ ದೊಡ್ಡ ಮಟ್ಟದಲ್ಲಿ ನಿರೀಕ್ಷೆ ಇದೆ. ಅವರು ಈ ಚಿತ್ರದ ಬಗ್ಗೆ ಹೆಚ್ಚು ಕಾಳಜಿ ತೋರುತ್ತಿದ್ದಾರೆ. ಈಗಾಗಲೇ ಪರ ಭಾಷೆಯಲ್ಲಿ ಒಂದು ಹಂತದ ಪ್ರಚಾರ ಕಾರ್ಯ ಪೂರ್ಣಗೊಂಡಿದೆ. ಈ ಚಿತ್ರದ ಮೇಲೆ ನಮ್ಮ ಕನ್ನಡ ಜನತೆಯವರು ತುಂಬಾನೇ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಕೆಜಿಎಫ್ ತರಾನೇ ಇದು ಒಂದು ದೊಡ್ಡ ಯಶಸ್ಸು ಸಿಗಬೇಕಂತ ಎಲ್ಲರ ಬಯಕೆ ಅದೇ ರೀತಿ ಇದು ಹೆಸರು ಮಾಡುವ ಚಿಹ್ನೆಗಳು ಕೂಡ ಸಿಗುತ್ತಿದೆ. ಇನ್ನ ಕಿಚ್ಚ ಸುದೀಪ್ ಅಂತು ಇಡೀ ದೇಶಕ್ಕೆ ಗೊತ್ತು ಈ ಚಿತ್ರ ಯಶಸ್ಸು ಕಾಣಲಿ ಎಂದು ಹಾರೈಸೋಣ. ಕಿಚ್ಚ & ಅಪ್ಪು ಅವರ ಸ್ನೇಹದ ಭಾಂದವ್ಯದ ಬಗ್ಗೆ ನಿಮ್ಮ ಅಭಿಪ್ರಾಯವೇನು.? ತಪ್ಪದೆ ನಮಗೆ ಕಾಮೆಂಟ್ ಮಾಡಿ ಈ ಮಾಹಿತಿಯನ್ನು ಶೇರ್ & ಲೈಕ್ ಮಾಡಿ.

https://youtu.be/n7nAYoLqupc

Leave a Comment

WhatsApp Group Join Now
Telegram Group Join Now