Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

ಮಹಿಳೆಯರಿಗೆ ಹೊಸ ಯೋಜನೆ ಜಾರಿ, ಧನಶ್ರೀ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ರೂ.30,000 ಉಚಿತ, ಅರ್ಜಿ ಸಲ್ಲಿಸುವುದು ಹೇಗೆ ನೋಡಿ.!

Posted on November 24, 2023 By Kannada Trend News No Comments on ಮಹಿಳೆಯರಿಗೆ ಹೊಸ ಯೋಜನೆ ಜಾರಿ, ಧನಶ್ರೀ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ರೂ.30,000 ಉಚಿತ, ಅರ್ಜಿ ಸಲ್ಲಿಸುವುದು ಹೇಗೆ ನೋಡಿ.!

 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ರಾಜ್ಯದ ಮಹಿಳೆಯರಿಗಾಗಿ ಹಲವಾರು ಕಲ್ಯಾಣ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಗ್ಯಾರೆಂಟಿ ಯೋಚನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯು ಕೂಡ ಇಲಾಖೆ ಜವಾಬ್ದಾರಿಯಾಗಿದೆ. ಇದರ ಜೊತೆಗೆ 2023-24ನೇ ಸಾಲಿನ ವಿವಿಧ ಯೋಜನೆಗಳನ್ನು ಘೋಷಿಸಿದ್ದು, ಅರ್ಹರು ಅರ್ಜಿ ಸಲ್ಲಿಸುವಂತೆ ಯೋಜನೆ ಬಗ್ಗೆ ವಿಸ್ತಾರವಾದ ವರದಿ ಒಳಗೊಂಡಿರುವ ಅಧಿಕೃತ ಪ್ರಕಟಣೆ ಕೂಡ ಹೊರಡಿಸಿದೆ.

ಯಾವೆಲ್ಲ ಯೋಜನೆಗಳ ಸೌಲಭ್ಯಗಳಿವೆ? ಈ ಯೋಜನೆಗಳಿಂದ ಸಿಗುತ್ತಿರುವ ಅನುಕೂಲತೆಗಳೇನು? ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸುವುದು ಹೇಗೆ? ಇದಕ್ಕೆ ಕೊನೆಯ ದಿನಾಂಕ ಎಂದು? ಎನ್ನುವುದರ ವಿವರ ಹೀಗಿದೆ ನೋಡಿ.

1. ಉದ್ಯೋಗಿನಿ ಯೋಜನೆ:-
ಕರ್ನಾಟಕ ರಾಜ್ಯದ 18 ರಿಂದ 55 ವರ್ಷದ ಒಳಗಿನ ವಯೋಮಾನದ ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಇಚ್ಚಿಸುವ ಮಹಿಳೆಯರು ಈ ಯೋಜನೆಯಡಿ ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮಗಳ ಮೂಲಕ ಸಹಾಯಧನ ಪಡೆಯಬಹುದು.

* ಆದಾಯದ ಮಿತಿ 2 ಲಕ್ಷದ ಒಳಗಿರುವ SC/ST ಫಲಾನುಭವಿಗಳಿಗೆ ಘಟಕ ವೆಚ್ಚ 1 ಲಕ್ಷದಿಂದ ಗರಿಷ್ಠ 3 ಲಕ್ಷದವರೆಗೆ ಸಾಲ ಲಭ್ಯವಿರುತ್ತದೆ. ಈ ಸಾಲಕ್ಕೆ ನಿಗಮದ ವತಿಯಿಂದ 50%ರಷ್ಟು ಸಹಾಯಧನ ಸಿಗಲಿದ್ದು, ಉದ್ಯೋಗಿನಿ ಯೋಜನೆಗೆ ನಿಗಮದಲ್ಲಿ ಅರ್ಜಿ ಸಲ್ಲಿಸುವ ಮೂಲಕ ಪಡೆದುಕೊಳ್ಳಬಹುದು.

* ಆದಾಯದ ಮಿತಿ 1.5 ಲಕ್ಷದ ಒಳಗಿರುವ ಸಾಮಾನ್ಯ ವರ್ಗದ ಮಹಿಳೆಯರಿಗೆ ಘಟಕ ವೆಚ್ಚ 3 ಲಕ್ಷದವರೆಗೂ ಬ್ಯಾಂಕ್ ಗಳಲ್ಲಿ ಸಾಲ ಸೌಲಭ್ಯ ಸಿಗಲಿದೆ, ಉದ್ಯೋಗಿನಿ ಯೋಜನೆ ಸಹಾಯಧನ ಕೋರಿ ನಿಗಮಕ್ಕೆ ಅರ್ಜಿ ಸಲ್ಲಿಸಿ 30%ರಷ್ಟು ಸಹಾಯಧನ ಪಡೆಯಬಹುದು.

2. ಚೇತನ ಯೋಜನೆ:-
18 ವರ್ಷ ಮೇಲ್ಪಟ್ಟ ರಾಜ್ಯದ ದಮನಿತ ಮಹಿಳೆಯರು ಆದಾಯ ಉತ್ಪನ್ನ ಚಟುವಟಿಕೆ ಕೈಗೊಳ್ಳಲು ಇಚ್ಚಿಸಿದರೆ ಚೇತನ ಯೋಜನೆಯಡಿ ರೂ.30,000 ಗಳ ಪ್ರೋತ್ಸಾಹ ಧನ ಸಿಗುತ್ತದೆ.

3. ಧನಶ್ರೀ ಯೋಜನೆ:-
ಕರ್ನಾಟಕ ರಾಜ್ಯದ 18 ವರ್ಷ ಮೇಲ್ಪಟ್ಟ 60 ವರ್ಷ ಒಳಗಿನ ವಯಸ್ಸಿನ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಇಚ್ಚಿಸಿದರೆ ಧನಶ್ರೀ ಯೋಜನೆ ಅಡಿ ರೂ. 30,000 ಗಳ ಪ್ರೋತ್ಸಾಹ ಧನ ಪಡೆಯಬಹುದು.

4. ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ:-
ಈ ಯೋಜನೆಯಡಿ 18 ವರ್ಷ ಮೇಲ್ಪಟ್ಟ ರಾಜ್ಯದ ಮಹಿಳೆಯರು ಆದಾಯ ಉತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ. 30,000 ಗಳ ಪ್ರೋತ್ಸಾಹ ಧನ ಪಡೆಯಲು ಅರ್ಜಿ ಸಲ್ಲಿಸಬಹುದು.

5. ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ:-
1993-94 ಮತ್ತು 2007-08 ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಯೋಜನೆ ಜಾರಿ ಮಾಡಲಾಗಿದೆ. ಮಾಜಿ ದೇವದಾಸಿ ಮಹಿಳೆಯರು ಆದಾಯ ಉತ್ಪನ್ನ ಚಟುವಟಿಕೆ ಕೈಗೊಳ್ಳಲು ಇಚ್ಚಿಸಿದರೆ ರೂ.30,000 ಗಳ ವರೆಗೆ ನಿಗಮದಿಂದ ಪ್ರೋತ್ಸಾಹ ಧನ ಸಿಗುತ್ತದೆ.

ನಿಯಮ ಹಾಗೂ ನಿಬಂಧನೆಗಳು:-
* ಈ ಯೋಜನೆಯ ಸಹಾಯಧನ ಅಥವಾ ಪ್ರೋತ್ಸಾಹ ಧನ dbt ಮೂಲಕ ಫಲಾನುಭವಿಗಳ ಖಾತೆಗೆ ವರ್ಗಾವಣೆ ಆಗುತ್ತದೆ. ಆದ ಕಾರಣ ಅರ್ಜಿದಾರರು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು.

* ಉದ್ಯೋಗಿನಿ ಯೋಜನೆಯ SCSP/TSP ಬಳಕೆಯಾಗದ ಅನುದಾನದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಅರ್ಜಿದಾರರು ಸಹ ಸೇವಾ ಸಿಂಧು ಪೋರ್ಟನಲ್ಲಿಯೇ ಅರ್ಜಿ ಸಲ್ಲಿಸಬೇಕು.
* ಸರ್ಕಾರದ ಕೋಟ ಮತ್ತು ನಿಗಮದ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಛಿಸುವ ಫಲಾನುಭವಿಗಳು ಮಾನ್ಯ ಸಚಿವರು / ಮಾನ್ಯ ಶಾಸಕರು / ಕರ್ನಾಟಕ ಸರ್ಕಾರದ ಮಾನ್ಯ ಅಧ್ಯಕ್ಷರು /ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಇವರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಧಾನ:-
* ಈ ಮೇಲೆ ತಿಳಿಸಿದ ಯಾವುದೇ ಯೋಜನೆಗಾದರೂ ಆನ್ಲೈನ್ ನಲ್ಲಿಯೇ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.
* ಅರ್ಜಿದಾರರು ಹತ್ತಿರದ ಬಾಪೂಜಿ ಸೇವಾ ಕೇಂದ್ರ / ಗ್ರಾಮ ಒನ್ / ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.

ವೆಬ್ ಸೈಟ್ ವಿಳಾಸ:-
ಅರ್ಜಿ ಸಲ್ಲಿಸಲು:
https://sevasindhu.karnataka.gov.in
ಹೆಚ್ಚಿನ ಮಾಹಿತಿಗಾಗಿ:
https://kswdc.karnataka.gov.in

ಪ್ರಮುಖ ದಿನಾಂಕಗಳು
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ – 22.11.2023
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – 22.12.2023

Useful Information
WhatsApp Group Join Now
Telegram Group Join Now

Post navigation

Previous Post: ಅಕ್ಕಿ ತೊಳೆದ ನೀರಿನಿಂದ ಆರೋಗ್ಯಕ್ಕೆ ಎಷ್ಟು ಅನುಕೂಲ ನೋಡಿ.!
Next Post: ಅರಿಶಿಣದ ಮಹತ್ವ.!

Leave a Reply Cancel reply

Your email address will not be published. Required fields are marked *

Copyright © 2025 Kannada Trend News.


Developed By Top Digital Marketing & Website Development company in Mysore