Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

ಭಾಗ್ಯಲಕ್ಷ್ಮಿ ಯೋಜನೆಯ ಒಂದು ಲಕ್ಷ ರೂಪಾಯಿ ಪಡೆಯುವ ವಿಧಾನ, ಹೆಣ್ಣು ಮಕ್ಕಳಿರುವ ಪೋಷಕರು ಇದನ್ನು ತಿಳಿದುಕೊಂಡಿರಲೇಬೇಕು.!

Posted on June 15, 2023 By Kannada Trend News No Comments on ಭಾಗ್ಯಲಕ್ಷ್ಮಿ ಯೋಜನೆಯ ಒಂದು ಲಕ್ಷ ರೂಪಾಯಿ ಪಡೆಯುವ ವಿಧಾನ, ಹೆಣ್ಣು ಮಕ್ಕಳಿರುವ ಪೋಷಕರು ಇದನ್ನು ತಿಳಿದುಕೊಂಡಿರಲೇಬೇಕು.!

 

ಹೆಣ್ಣು ಮಕ್ಕಳ ಸ್ಥಾನವನ್ನು ಮೊದಲು ಕುಟುಂಬದಲ್ಲಿ ನಂತರ ಸಮಾಜದಲ್ಲಿ ಹೆಚ್ಚಿಸಲು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಹೆಣ್ಣು ಮಗುವಿನ ಜನನವನ್ನು ಉತ್ತೇಜಿಸಲು 2006-07ನೇ ಸಾಲಿನಲ್ಲಿ ಹೆಣ್ಣು ಮಕ್ಕಳ ರಕ್ಷಣೆಗಾಗಿ ಕರ್ನಾಟಕ ಸರ್ಕಾರವು ಬಾಗ್ಯಲಕ್ಷ್ಮಿ ಎನ್ನುವ ಈ ಹೊಸ ಯೋಜನೆಯನ್ನು ಜಾರಿಗೆ ತಂದಿತು. ಈ ಯೋಜನೆಯ ಆರ್ಥಿಕ ಸೌಲಭ್ಯವಾಗಿ ಒಂದು ಲಕ್ಷ ರೂಪಾಯಿ ಹಣವನ್ನು ಹೆಣ್ಣು ಮಗುವಿಗೆ ಅದರ ತಾಯಿ /ತಂದೆ/ಪೋಷಕರ ಮೂಲಕ ಕೆಲವು ನಿಬಂಧನೆಗಳನ್ನು ಪೂರೈಸಿದ್ದಲ್ಲಿ ನೀಡಲಾಗುವುದು.

ಭಾಗ್ಯಲಕ್ಷ್ಮಿ ಯೋಜನೆಗೆ ಇರುವ ನಿಬಂಧನೆಗಳು:-
● ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ 31.03.2006 ರ ನಂತರ ಜನಿಸಿದ ಹೆಣ್ಣು ಮಕ್ಕಳು ಈ ಯೋಜನೆಯಡಿ ಫಲಾನುಭವಿಗಳಾಗಿ ನೋಂದಾಯಿಸಿಕೊಳ್ಳಲು ಅರ್ಹರಿರುತ್ತಾರೆ.
● ಮಗುಜನಿಸಿದ ಒಂದು ವರ್ಷದವರೆಗೂ ಜನನ ಪ್ರಮಾಣ ಪತ್ರವನ್ನು ನೀಡಿ ನೋಂದಾಯಿಸಲು ಅವಕಾಶವಿರುತ್ತದೆ.
● ಈ ಯೋಜನೆಯನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಇಬ್ಬರು ಹೆಣ್ಣು ಮಕ್ಕಳಿಗೆ ಸೀಮಿತಗೊಳಿಸಲಾಗಿದೆ.

● ಫಲಾನುಭವಿಗಳಾಗುವ ಹೆಣ್ಣು ಮಕ್ಕಳ ತಂದೆ ಅಥವಾ ತಾಯಿ ಶಾಶ್ವತ ಕುಟುಂಬ ಯೋಜನೆ ಅಳವಡಿಸಿಕೊಂಡಿರಬೇಕು, ಮನೆಯಲ್ಲಿ ಮಕ್ಕಳ ಸಂಖ್ಯೆ 2 ಕ್ಕಿಂತ ಹೆಚ್ಚಿರಬಾರದು.
● ಭಾಗ್ಯಲಕ್ಷ್ಮಿ ಯೋಜನೆಯಡಿ ನೋಂದಣಿಯಾದ ಕುಟುಂಬದಲ್ಲಿನ ಮೊದಲನೇ ಹೆಣ್ಣು ಮಗುವಿನ ಹೆಸರಿನಲ್ಲಿ 19,300 ಹಾಗೂ ಅದೇ ಕುಟುಂಬದಲ್ಲಿನ ಎರಡನೇ ಹೆಣ್ಣು ಮಗುವಿನ ಹೆಸರಿನಲ್ಲಿ 18,350 ರೂಗಳನ್ನು ಪಾಲುದಾರರ ಹಣಕಾಸು ಸಂಸ್ಥೆಯಲ್ಲಿ ಪ್ರಾರಂಭಿಕ ಠೇವಣಿ ಇಡಲಾಗುತ್ತದೆ.
● 18 ವರ್ಷ ಪೂರ್ಣಗೊಂಡ ನಂತರದಲ್ಲಿ ಹೆಣ್ಣು ಮಕ್ಕಳು ಒಂದು ಲಕ್ಷ ಪರಿಪಕ್ವ ಮೊತ್ತ ಪಡೆಯಲು ಅರ್ಹರಿರುತ್ತಾರೆ.

ಈ ಯೋಜನೆಯ ಉದ್ದೇಶಗಳು:-
● ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಲ್ಲಿ ಹೆಣ್ಣು ಮಕ್ಕಳ ಜನನವನ್ನು ಉತ್ತೇಜಿಸುವ ಮತ್ತು ಆತ್ಮಸ್ಥೈರ್ಯ ತುಂಬುವುದು.
● ಬಾಲ ಕಾರ್ಮಿಕತೆ, ಹೆಣ್ಣು ಭ್ರೂಣ ಹತ್ಯೆ, ಬಾಲ್ಯ ವಿವಾಹ ಮತ್ತು ಹೆಣ್ಣು ಮಕ್ಕಳ ಮಾರಾಟ ಮುಂತಾದ ಸಾಮಾಜಿಕ ಪಿಡುಗುಗಳನ್ನು ತಡೆಗಟ್ಟುವುದು.
● ಆರೋಗ್ಯ, ಶಿಕ್ಷಣ, ಪೋಷಣೆ ಮತ್ತು ಪೌಷ್ಠಿಕತೆಯ ಮಟ್ಟವನ್ನು ಉತ್ತಮ ಪಡಿಸುವುದರ ಮೂಲಕ ಹೆಣ್ಣು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯನ್ನು ಉತ್ತಮಪಡಿಸುವುದು.
● ಹೆಣ್ಣು ಮಗುವಿಗೆ ಆರ್ಥಿಕ ನೆರವು ನೀಡುವುದರ ಮೂಲಕ ಅವರನ್ನು ಸಮಾಜದಲ್ಲಿ ಸದೃಢರನ್ನಾಗಿ ಮಾಡುವುದು.

ಈ ಯೋಜನೆಯ ಸೌಲಭ್ಯವನ್ನು ಪಡೆಯಲು ಇರಬೇಕಾದ ಅರ್ಹತೆಗಳು:-
● ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಗುರುತಿಸಿ ಶಾಶ್ವತ BPL ಕಾರ್ಡ್ ಅಥವಾ ಆದ್ಯತ ಕುಟುಂಬ ಪಡಿತರ ಚೀಟಿ ಹೊಂದಿರುವ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದಲ್ಲಿ ಜನಿಸಿದ ಇಬ್ಬರು ಹೆಣ್ಣು ಮಕ್ಕಳು ಅರ್ಹರಿರುತ್ತಾರೆ.
● ಕುಟುಂಬದಲ್ಲಿ ಮಕ್ಕಳ ಸಂಖ್ಯೆ ಎರಡನ್ನು ಮೀರಿರಬಾರದು, ಮೊದಲನೇ ಹೆರಿಗೆಯಲ್ಲೇ ಅಥವಾ ಎರಡನೇ ಹೆರಿಗೆಯಲ್ಲಿ ಅವಳಿ ಅಥವಾ ತ್ರಿವಳಿ ಹೆಣ್ಣು ಮಕ್ಕಳಾಗಿದ್ದಲ್ಲಿ ಎಲ್ಲಾ ಹೆಣ್ಣು ಮಕ್ಕಳು ಈ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.

● ಗ್ರಾಮೀಣ ಪ್ರದೇಶ ಹಾಗೂ ನಗರ ಪ್ರದೇಶಗಳಲ್ಲೂ ಅನುಷ್ಠಾನಗೊಳಿಸಲಾಗುವುದು.
● ಅಂಗನವಾಡಿ ಕೇಂದ್ರಗಳಲ್ಲಿ ಪೋಷಕರು ಮೊದಲು ನೋಂದಾಯಿಸಬೇಕು, ಅಂಗನವಾಡಿ ಕೇಂದ್ರಗಳು ಇಲ್ಲದ ಸ್ಥಳದಲ್ಲಿ ಹತ್ತಿಯಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ ನೋಂದಾಯಿಸಬಹುದು.
● ಮಗುವಿನ ಜನನ ಪ್ರಮಾಣ ಪತ್ರದ ದಾಖಲೆಯನ್ನು ಕಡ್ಡಾಯವಾಗಿ ಹೊಂದಿರಬೇಕು.
● ಪರಿಪಕ್ವ ಮೊತ್ತವನ್ನು ಪಡೆಯಲು ಮಗು ಕಡ್ಡಾಯವಾಗಿ 8ನೇ ತರಗತಿವರೆಗೂ ವಿದ್ಯಾಭ್ಯಾಸ ಮಾಡಿರಲೇಬೇಕು.

● ವಿಕಲಚೇತನ ಮಕ್ಕಳಿಗೆ ಇದರಲ್ಲಿ ಸಡಿಲಿಕೆ ಇದೆ. ಜಿಲ್ಲಾಧಿಕಾರಿಗಳ ಅನುಮತಿ ಪಡೆದು 5ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದರು ಸಾಕು.
● 5ನೇ / 8ನೇ ತರಗತಿ ಉತ್ತೀರ್ಣರಾಗಿರುವ ಬಗ್ಗೆ ಶಾಲಾ ಮುಖ್ಯೋಪಾಧ್ಯಾಯರಿಂದ ಧೃಡೀಕರಣ ಪತ್ರ ಸಲ್ಲಿಸಬೇಕು.
● ಬಾಲ ಕಾರ್ಮಿಕಳಾಗಿರತಕ್ಕದ್ದಲ್ಲ.
● 18 ವರ್ಷ ತುಂಬುವ ಮುನ್ನ ವಿವಾಹವಾಗುವಂತಿಲ್ಲ.
● ಈ ಮೇಲಿನ ಅರ್ಹತೆಗಳಲ್ಲಿ ಯಾವುದನ್ನು ಮೀರಿದರೂ ಕೂಡ ಈ ಸೌಲಭ್ಯವನ್ನು ಸರ್ಕಾರವು ಮುಟ್ಟುಗೋಲು ಹಾಕಿಕೊಳ್ಳುತ್ತದೆ.

Useful Information
WhatsApp Group Join Now
Telegram Group Join Now

Post navigation

Previous Post: ಇಂದಿನಿಂದ ಗೃಹಲಕ್ಷ್ಮಿ ಯೋಜನೆ ಮತ್ತು ಶಕ್ತಿ ಯೋಜನೆ ಸ್ಮಾರ್ಟ್ ಕಾರ್ಡ್ ಪಡೆಯುವುದಕ್ಕೆ ಅರ್ಜಿ ಸಲ್ಲಿಸಲು ಅವಕಾಶ.! ಅಪ್ಲೈ ಮಾಡುವುದು ಹೇಗೆ ನೋಡಿ.!
Next Post: ಒಂದು ಶಿವಲಿಂಗದಲ್ಲಿ 350 ಮುಖಗಳು. ಈ ಅದ್ಭುತ ದೇವಲಾಯದ ಬಗ್ಗೆ ನೀವು ತಿಳಿಯಲೇಬೇಕು.!

Leave a Reply Cancel reply

Your email address will not be published. Required fields are marked *

Copyright © 2025 Kannada Trend News.


Developed By Top Digital Marketing & Website Development company in Mysore