ನಮ್ಮ ರಾಜ್ಯದಲ್ಲಿ 2023-24ನೇ ಸಾಲಿನ ಶೈಕ್ಷಣಿಕ ತರಗತಿಗಳು ಆರಂಭ ಆಗಿವೆ. ಎಂದಿನಂತೆ ಶಾಲಾ ಕಾಲೇಜುಗಳಲ್ಲಿ ತರಗತಿಗಳು ನಡೆಯುತ್ತಿದ್ದು, ವಿದ್ಯಾರ್ಥಿಗಳು ಬಾಗಿ ಆಗುತ್ತಿದ್ದಾರೆ. ಆದರೆ ದೂರದ ಊರಿನ ಶಾಲೆ ಕಾಲೇಜಿಗೆ ಸೇರ್ಪಡೆ ಆಗಿ, ಮನೆಯಿಂದಲೇ ಪ್ರತಿದಿನ ಓಡಾಡುವ ವಿದ್ಯಾರ್ಥಿಗಳಿಗೆ ತೊಂದರೆ ಆಗಿದೆ. ಯಾಕೆಂದರೆ ಈ ರೀತಿ ಪ್ರತಿದಿನ ಸರಕಾರಿ ಬಸ್ ಗಳಲ್ಲಿ ಓಡಾಡುತ್ತಿದ್ದ ವಿದ್ಯಾರ್ಥಿಗಳು ಮೊದಲು ಪಾಸ್ ಪಡೆದುಕೊಳ್ಳಬೇಕಾಗಿತ್ತು.
ಕೆಲ ವಿದ್ಯಾರ್ಥಿಗಳಿಗೆ ಉಚಿತ ಮತ್ತು ಕೆಲ ವಿದ್ಯಾರ್ಥಿಗಳಿಗೆ ಶುಲ್ಕವನ್ನು ಪಾವತಿ ಮಾಡಿಕೊಂಡು ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ನಿಗಮ ಪಾಸ್ ನೀಡುತ್ತಿತ್ತು. ಆದರೆ ಈಗ ಶಾಲಾ-ಕಾಲೇಜು ಆರಂಭವಾಗಿ ವಿದ್ಯಾರ್ಥಿಗಳು ಹಾಜರಾಗುತ್ತಿದ್ದರು ಕೂಡ ಈ ವರ್ಷದ ಪಾಸ್ ಪಡೆಯಲು ಅರ್ಜಿ ಸಲ್ಲಿಸಲು ಅವಕಾಶ ನೀಡಿಲ್ಲ.
ಇದುವರೆಗೆ ವಿದ್ಯಾರ್ಥಿಗಳು ತಾವು ಶಾಲಾ ಕಾಲೇಜಿಗೆ ದಾಖಲಾಗಿರುವ ಬಗ್ಗೆ ಗುರುತಿನ ಚೀಟಿ ಮತ್ತು ಅವರ ವೈಯಕ್ತಿಕ ವಿವರಗಳಿಗೆ ಸಂಬಂಧಪಟ್ಟ ಹಾಗೆ ಪುರಾವೆಗಳನ್ನು ಕೊಟ್ಟು ಸೇವಾ ಸಿಂಧು ತಂತ್ರಾಂಶದ ಮೂಲಕ ನೋಂದಣಿ ಮಾಡಿಕೊಂಡು ಈ ಉಚಿತ ಪಾಸ್ ಪಡೆದುಕೊಳ್ಳುತ್ತಿದ್ದರು. ಆದರೆ ಈಗ ತಂತ್ರಾಂಶದ ಸಣ್ಣಪುಟ್ಟ ತೊಂದರೆಯಿಂದಾಗಿ ಆನ್ಲೈನ್ ಅಲ್ಲಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ವಿಳಂಬ ಆಗಿದೆ.
ಈ ವೆಬ್ಸೈಟ್ ಅನ್ನು ಸರಿಪಡಿಸುವ ಕಾರ್ಯ ನಡೆಯುತ್ತಿದ್ದು ಇದಕ್ಕಾಗಿ ಕೆಲ ಸಮಯ ಹಿಡಿಯುತ್ತದೆ. ಅಲ್ಲಿಯವರೆಗೂ ಕೂಡ ಶಾಲಾ ಕಾಲೇಜಿಗೆ ತೆರಳಲು ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದು ಎನ್ನುವ ಕಾರಣಕ್ಕಾಗಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ನಿಗಮ ಸುತ್ತೊಲೆಯನೊಂದನ್ನು ಹೊರಡಿಸಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕೊಟ್ಟಿರುವ ಬಗ್ಗೆ ಮಾಹಿತಿ ತಿಳಿಸಿದೆ. ಇದರೊಂದಿಗೆ ಉಚಿತ ಪ್ರಯಾಣ ಮಾಡುವ ವಿದ್ಯಾರ್ಥಿಗಳಿಗೆ ಕೆಲ ಪ್ರಮುಖ ಸೂಚನೆಗಳನ್ನು ಕೂಡ ನೀಡಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಪಮುಖ್ಯ ಸಂಚಾರ ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕಾಧಿಕಾರಿಯು ಈ ಬಗ್ಗೆ ಪ್ರಕಟಣೆಯನ್ನು ಹೊರಡಿಸಿದ್ದಾರೆ. ಈ ಮೇಲೆ ತಿಳಿಸಿದಂತೆ ವಿದ್ಯಾರ್ಥಿಗಳಿಗೆ ಪಾಸ್ ವಿತರಣೆ ಮಾಡಲು ವೆಬ್ಸೈಟ್ ಸಿದ್ಧಗೊಳಿಸುತ್ತಿರುವ ಕಾರಣ 16-5-2023ರವರೆಗೆ ವಿದ್ಯಾರ್ಥಿಗಳು ಉಚಿತವಾಗಿ ನಗರ, ಹೊಲವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ ಗಳಲ್ಲಿ ಪ್ರಯಾಣಿಸಬಹುದು.
ಆದರೆ ಕಂಡಕ್ಟರ್ಗಳು ಪರಿಶೀಲನೆ ಮಾಡುವ ವೇಳೆ ಕಳೆದ ವರ್ಷದ ಪಾಸ್ ಗಳನ್ನು ಇಟ್ಟುಕೊಂಡಿರುವ ವಿದ್ಯಾರ್ಥಿಗಳು ಅದನ್ನು ತೋರಿಸಬಹುದು, ಒಂದು ವೇಳೆ ಇಲ್ಲವಾದಲ್ಲಿ ಪ್ರಸಕ್ತ ವರ್ಷದ ಶೈಕ್ಷಣಿಕ ತರಗತಿಗೆ ದಾಖಲಾಗಿರುವ ಬಗ್ಗೆ ಶಾಲಾ ಕಾಲೇಜುಗಳು ನೀಡುವ ಐಡಿ ಕಾರ್ಡ್ ಅನ್ನು ಕೂಡ ತೋರಿಸಿ ಪ್ರಯಾಣ ಮಾಡಬಹುದು ಎಂದು ತಿಳಿಸಿದ್ದಾರೆ. ಆದರೆ ಈ ಅವಕಾಶವೂ ಸುತ್ತೋಲೆಯಲ್ಲಿ ತಿಳಿಸಿರುವಂತೆ 15.06.2023ರ ವರೆಗೆ ಮಾತ್ರ ಲಭ್ಯವಿರಲಿದೆ.
ಈಗಾಗಲೇ ಶಕ್ತಿ ಯೋಜನೆ ಅಡಿ ಕರ್ನಾಟಕದ ಮಹಿಳೆಯರಿಗೆ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ KSRTC &BMTC ಬಸ್ ಗಳಲ್ಲಿ ಉಚಿತ ಪ್ರಯಾಣ ಇರುವುದರಿಂದ ವಿದ್ಯಾರ್ಥಿನಿಯರು ಕೂಡ ಇದಕ್ಕೆ ಸೇರುತ್ತಾರೆ. ನಂತರ ಇನ್ನುಳಿದ ವಿದ್ಯಾರ್ಥಿಗಳು ಎಂದಿನಂತೆ ದಾಖಲೆಗಳನ್ನು ಕೊಟ್ಟು ಸೇವಾ ಸಿಂಧು ತಂತ್ರಾಂಶದ ಮೂಲಕ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಿ ಉಚಿತ ಪಾಸ್ ಅಥವಾ ರಿಯಾಯಿತಿ ದರದಲ್ಲಿ ಪಾಸ್ ಪಡೆದುಕೊಂಡು ಓಡಾಡಬಹುದು. ಇಂತಹ ಉಪಯುಕ್ತ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೂ ಹಂಚಿಕೊಳ್ಳಿ.
*ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಲಕ್ಷ್ಮಿ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ. ಈ ಕೂಡಲೇ ಕರೆ ಮಾಡಿ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ. 9845866654*