ಕರ್ನಾಟಕದಲ್ಲಿ ನೂತನವಾಗಿ ಅಧಿಕಾರ ಸ್ಥಾಪಿಸಿರುವ ಕಾಂಗ್ರೆಸ್ (Congres) ನೇತೃತ್ವದ ರಾಜ್ಯ ಸರ್ಕಾರವು ಚುನಾವಣೆ ಪೂರ್ವವಾಗಿ ಜನರಿಗೆ ಪಂಚ ಗ್ಯಾರಂಟಿಗಳ (five guaranty Scheme) ಆಶ್ವಾಸನೆ ನೀಡಿತ್ತು. ಆ ಪ್ರಕಾರವಾಗಿ ಶಕ್ತಿ ಯೋಜನೆ, ಗೃಹ ಜ್ಯೋತಿ, ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆಗಳ ಪ್ರಯೋಜನವನ್ನು ರಾಜ್ಯದ ಜನತೆ ಪಡೆಯುತ್ತಿದ್ದಾರೆ.
5ನೇ ಗ್ಯಾರಂಟಿಯಾಗಿ ಯುವನಿಧಿ ಯೋಜನೆ (Yuvanidhi Scheme) ಕೂಡ ಜಾರಿಗೆ ತರಲು ತಯಾರಾಗಿದೆ. ಈಗ ಸರ್ಕಾರಕ್ಕೆ ಆರು ತಿಂಗಳು ತುಂಬಿರುವ ಸಂಭ್ರಮ, ಇದರ ಜೊತೆಗೆ 5ನೇ ಗ್ಯಾರಂಟಿ ಯೋಜನೆಯನ್ನು ಕೂಡ ಜಾರಿಗೆ ತಂದು ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಸರ್ಕಾರ ಮುಂದಾಗಿದೆ.
ಆ ಪ್ರಕಾರವಾಗಿ ಯುವನಿಧಿ ಯೋಜನೆಗೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? ಅರ್ಜಿಯಲ್ಲಿ ಸಲ್ಲಿಸಬೇಕು ಬೇಕಾಗುವ ದಾಖಲೆಗಳೇನು? ಯಾವ ದಿನಾಂಕದಿಂದ ಅರ್ಜಿ ಸಲ್ಲಿಸಬೇಕು ಎನ್ನುವುದರ ವಿವರವನ್ನು ಈ ಅಂಕಣದಲ್ಲಿ ತಿಳಿಸಿ ಕೊಡುತ್ತಿದ್ದೇವೆ.
* ಯೋಜನೆಯ ಹೆಸರು:- ಯುವನಿಧಿ ಯೋಜನೆ
ಯುವನಿಧಿ ಯೋಜನೆ ಕಾಂಗ್ರೆಸ್ ಪಕ್ಷ ನೀಡಿದ ಐದನೇ ಗ್ಯಾರಂಟಿ ಯೋಜನೆಯಾಗಿದ್ದು, ಈ ಯೋಜನೆ ಮೂಲಕ ನಿರುದ್ಯೋಗ ಯುವ ಜನತೆಗೆ ಪ್ರತಿ ತಿಂಗಳ ನಿರುದ್ಯೋಗಭತ್ಯೆ ನೀಡಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ ನಂತರ ಈ ಯೋಜನೆಯ ನಿಯಮಗಳಲ್ಲಿ ಮಾರ್ಪಾಡು ಮಾಡಿ ಕೆಲ ಕಂಡೀಶನ್ ಗಳನ್ನು ಹೇಳಲಾಗಿದೆ. ಈ ನಿರುದ್ಯೋಗ ಭತ್ಯೆ ಪಡೆಯಲು ಹೇರಿರುವ ಕಂಡೀಷನ್ ಗಳ ವಿವರ ಹೀಗಿದೆ.
1. ಎಲ್ಲರಿಗೂ ತಿಳಿದಿರುವಂತೆ ಈ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಕರ್ನಾಟಕದ ಖಾಯಂ ನಿವಾಸಿಗಳಷ್ಟೇ ಅರ್ಹರಾಗಿರುತ್ತಾರೆ
2. 2022-23 ನೇ ಸಾಲಿನಲ್ಲಿ ಅಂತಿಮ ವರ್ಷದ ಪದವಿ ಹಾಗೂ ಅಂತಿಮ ವರ್ಷದ ಡಿಪ್ಲೋಮಾ ಪರೀಕ್ಷೆಗಳನ್ನು ಉತ್ತೀರ್ಣರಾಗಿರುವವರು ಮಾತ್ರ ಅರ್ಜಿ ಸಲ್ಲಿಸಬಹುದು.
3. ಡಿಪ್ಲೊಮಾ ಅಥವಾ ಪದವಿ ಉತ್ತೀರ್ಣರಾಗಿ ಆರು ತಿಂಗಳು ಕಳೆದರೂ ಕೆಲಸ ಸಿಗದಿದ್ದವರು ಮಾತ್ರ ಅರ್ಜಿ ಸಲ್ಲಿಸಬೇಕು
4. ಅರ್ಜಿ ಸಲ್ಲಿಸುವಾಗ ತಾವು ನಿರುದ್ಯೋಗಿಗಳು ಎನ್ನುವುದಕ್ಕೆ ಸ್ವಯಂ ಧೃಡೀಕರಣ ಪತ್ರ ಸಲ್ಲಿಸಬೇಕು ಮತ್ತು ಅದರ ನೋಟರಿ ಆಗಿರಬೇಕು ಒಂದು ವೇಳೆ ಇದು ಸುಳ್ಳು ಎಂದು ಸಾಬೀತದಲ್ಲಿ ಸರ್ಕಾರವು ದಂಡ ವಿಧಿಸುತ್ತದೆ
5. ಯಾವುದೇ ಸರ್ಕಾರಿ ಅಥವಾ ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವುದು, ಅಪ್ರೆಂಟಿಸ್ ಶಿಪ್ ನಲ್ಲಿ ಕೆಲಸ ಮಾಡುತ್ತಿರುವವರು ಅರ್ಜಿ ಸಲ್ಲಿಸಲು ಅರ್ಹರಲ್ಲ
6. ಈ ವರ್ಷ ಪದವಿ ಅಥವಾ ಡಿಪ್ಲೋಮೋ ಉತ್ತೀರ್ಣರಾಗಿದ್ದರು ವಿದ್ಯಾಭ್ಯಾಸ ಮುಂದುವರಿಸುವುದಾದರೆ ಮುಂದಿನ ಶೈಕ್ಷಣಿಕ ತರಗತಿಗಳಿಗೆ ದಾಖಲಾಗಿದ್ದರೆ ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.
7. ನಿರುದ್ಯೋಗ ಭತ್ಯೆ ಪಡೆಯುವ ಸಂದರ್ಭದಲ್ಲಿ ಕೆಲಸ ಸಿಕ್ಕಿದರೆ ಅದನ್ನು ಕೂಡ ಘೋಷಿಸಿಕೊಳ್ಳಬೇಕು
* ಸಿಗುವ ಸಹಾಯಧನ:-
1. ಡಿಪ್ಲೋಮೋ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ರೂ.1500
2. ಪದವಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ರೂ.3,000
* ಅರ್ಜಿ ಸಲ್ಲಿಸುವ ದಿನಾಂಕ:-
ಡಿಸೆಂಬರ್ 21, 2023 ರಿಂದ ಬಹು ನಿರೀಕ್ಷಿತ ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ ಮಾಡಲಾಗುತ್ತಿದೆ ಮತ್ತು ಒಂದು ತಿಂಗಳುಗಳ ಕಾಲ ಅರ್ಜಿ ಸ್ವೀಕಾರ ಹಾಗೂ ಪರಿಶೀಲನೆ ನಡೆದು ಜನವರಿ 2024ರ 20ನೇ ತಾರೀಖಿನ ನಂತರ ಫಲಾನುಭವಿಗಳ ಖಾತೆಗೆ DBT ಮೂಲಕ ಹಣ ವರ್ಗಾವಣೆ ಆಗುವ ಸಾಧ್ಯತೆ ಇದೆ.
* ಅರ್ಜಿ ಸಲ್ಲಿಸುವ ವಿಧಾನ:-
ಉಳಿದ 4 ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಸದ ರೀತಿ ಸೇವಾ ಸಿಂಧು ಪೋರ್ಟಲ್ ಮೂಲಕವೇ ಅರ್ಜಿ ಸಲ್ಲಿಸಬೇಕು.
* ವೆಬ್ಸೈಟ್ ವಿಳಾಸ:-
https://sevasindhu.karnataka.gov.in