ಕನ್ನಡ ಚಿತ್ರರಂಗದ ಪ್ರಸಿದ್ಧ ಹಾಗೂ ಹಿರಿಯಾ ನಟಿ ಸುಧಾರಾಣಿ ಅವರು ಯಾರಿಗೆ ತಿಳಿದಿಲ್ಲ. ಇವರು ಹದಿಮೂರರನೇ ವಯಸ್ಸಿನಲ್ಲೇ ಸುಧಾರಾಣಿ ನಾಯಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ರು. ರಾಜ್ ನಿರ್ಮಾಣ ಸಂಸ್ಥೆಯ ಮೂಲಕವಾಗಿ ಶಿವರಾಜಕುಮಾರ್ ಅವರು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ‘ಆನಂದ್’ ಚಿತ್ರಕ್ಕೆ ಸುಧಾರಾಣಿ ನಾಯಕಿಯಾದರು.
ಸದ್ಯ ಇವರು ಶ್ರೀ ರಸ್ತು ಶುಭಮಸ್ತು ಎನ್ನುವ ಧಾರಾವಾಹಿಯಲ್ಲಿ ಪ್ರಮುಖ ಪಾತ್ರವನ್ನು ಮಾಡಿ ಮತ್ತೆ ಬೆಳ್ಳಿ ತೆರೆಗೆ ಹಿಂತಿರುಗಿದ್ದಾರೆ, ಹೌದು ಗೆಳೆಯರೇ ನಟಿ ಸುಧಾರಾಣಿ ಅವರು ಅದೊಂದು ಕಾಲದಲ್ಲಿ ಅವರು ಒಂದರ ಹಿಂದೆ ಒಂದು ಎಂಬಂತೆ ಚಿತ್ರಗಳನ್ನೂ ಮಾಡಿ ಯಶಸ್ಸಿನ ಹಾದಿಗೆ ಚಿತ್ರಗಳನ್ನು ತಂದು ಅವರದೇ ಆದ ಚಾಪನ್ನು ಕನ್ನಡ ಚಿತ್ರರಂಗದಲ್ಲಿ ಮೂಡಿಸಿದರು. ಸುಧಾರಾಣಿ ಯವರು ಪಂಚಭಾಷೆಗಳಲ್ಲಿ ನಟಿಸಿ ಸೈ ಎನಿಸ್ಕೊಂಡಿದ್ದಾರೆ.
ಕನ್ನಡ ಚಿತ್ರರಂಗವಲ್ಲದೇ, ಮಲಯಾಳಂ, ತೆಲುಗು ಹಾಗೂ ತಮಿಳಿನಲ್ಲೂ ನಟಿಸಿರುವ ಹಿರಿ-ಕಿರುತೆರೆಯ ಜನಪ್ರಿಯ ನಟಿ ಸುಧಾರಾಣಿ ಅವರು ಜನ ಮೆಚ್ಚಿದ ನಾಯಕಿಯಾದವರು. ಮೂರನೇ ವಯಸ್ಸಿಗೆ ಮಾಡಲಿಂಗ್ ಶುರು ಮಾಡಿದ ಸುಧಾರಾಣಿ, 5 ವರ್ಷ ಇದ್ದಾಗಲೇ ನೃತ್ಯಕ್ಕೆ ಸೇರಿಕೊಳ್ಳುತ್ತಾರೆ. 7 ವರ್ಷವಿದ್ದಾಗ ಮೊದಲ ಶಾರ್ಟ್ ಫಿಲ್ಮಂ ಚಿತ್ರೀಕರಣ ಮಾಡಿದ್ದರು. ಕೆಲವು ಜಾಹೀರಾತುಗಳಲ್ಲೂ ಕಾಣಿಸಿಕೊಂಡಿದ್ದ ಸುಧಾರಾಣಿ ಅವರು, ಕೂಚಿಪುಡಿ ಹಾಗೂ ಭರತನಾಟ್ಯ ಕಲಿತ್ತಿದ್ದಾರೆ.
ಈಗ ಮೊದಲ ಬಾರಿಗೆ ಪೂರ್ಣ ಪ್ರಮಾಣದಲ್ಲಿ ಕಿರುತೆರೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ತಮ್ಮ ಅದ್ಬುತ ನಟನೆಯಿಂದ ಇವರು ದಶಕಗಳಿಂದ ಪ್ರೇಕ್ಷಕರ ಪ್ರೀತಿಯನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಈಗ ಕಿರುತೆರೆಯಲ್ಲೂ ಮನಗೆಲ್ಲಲು ರೆಡಿಯಾಗಿದ್ದಾರೆ. ಹೊರಗಿನ ಪ್ರಪಂಚವನ್ನು ಮರೆತು ತನ್ನ ಕುಟುಂಬವೇ ಒಂದು ಪ್ರಪಂಚ ಎಂದು ಬದುಕುತ್ತಿರುವ ಒಂದು ಹೆಣ್ಣು ತಾಯಿಯಾಗಿ, ಸೊಸೆಯಾಗಿ ಮನೆ ಹೀಗೆ ನಿಭಾಯಿಸಿಕೊಂಡು ಹೋಗುತ್ತಾಳೆ ಎಂಬ ಕಥೆಯಲ್ಲಿ ಮುಖ್ಯ ಪಾತ್ರಧಾರಿಯಾಗಿ ನಟಿಸಿದ್ದಾರೆ.
ಈ ಮೂಲಕ ಕಿರುತೆರೆಯತ್ತ ಬಂದಿರುವ ಸುಧಾರಾಣಿ ಈಗ ಬೋಲ್ಡ್ ಆಗಿ ಫೋಟೋಶೂಟ್ ಕೂಡ ಮಾಡಿಸಿದ್ದಾರೆ. ಮನ ಮೆಚ್ಚಿದ ಹುಡುಗಿ, ಆಸೆಗೊಬ್ಬ ಮೀಸೆಗೊಬ್ಬ, ಸಿರಿಗಂಧ, ಪಂಚಮವೇದ, ಮನೆದೇವ್ರು, ಅರಗಿಣಿ, ಸ್ವಾತಿ, ಅವನೇ ನನ್ನ ಗಂಡ, ಮೈಸೂರು ಮಲ್ಲಿಗೆ, ಮಿಡಿದ ಶೃತಿ, ಮಹಾಕ್ಷತ್ರಿಯ, ಅನುರಾಗ ಸಂಗಮ, ದೇವತಾ ಮನುಷ್ಯ, ಜೀವನ ಚೈತ್ರ, ಮನ ಮೆಚ್ಚಿದ ಹುಡುಗಿ, ಸಮರ, ಅಸೆಗೊಬ್ಬ ಮೀಸೆಗೊಬ್ಬ ಮುಂತಾದ ಹಲವಾರು ಯಶಸ್ವಿ ಚಿತ್ರಗಳಲ್ಲಿ ಸುಧಾರಾಣಿ ನಟಿಸಿದ್ದಾರೆ.
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರಗೊಳ್ಳುತ್ತಿರುವ ಬೆಟ್ಟದ ಹೂವು ದಾರಾವಾಹಿಯಲ್ಲಿ ದೀಪ್ತಿ ಪಾತ್ರವನ್ನು ನಿರ್ವಹಿಸುತ್ತಿರುವ ಚಂದನ ರಾಘವೇಂದ್ರ ಅವರು ಶ್ರೀರಸ್ತು ಶುಭಮಸ್ತು ಧಾರಾವಾಹಿಯಲ್ಲಿ ಮುಖ್ಯ ಪಾತ್ರವನ್ನು ನಿರ್ವಹಿಸಲಿದ್ದಾರೆ. ಜೀ ಮರಾಠಿಯಲ್ಲಿ ಪ್ರಸಾರಗೊಳ್ಳುತ್ತಿದ್ದ ‘ಅಗ್ಗಾಬಾಯಿ ಸನ್ಬಾಯಿ’ ಎಂಬ ಧಾರಾವಾಹಿಯ ರಿಮೇಕ್ ಆಗಿ ಶ್ರೀರಸ್ತು ಶುಭಮಸ್ತು ಧಾರಾವಾಹಿಯ ಕಥೆ ಇರಲಿದೆ ಎಂದು ಮೂಲಗಳು ಹೇಳುತ್ತಾ ಇವೆ.
ಇದಕ್ಕೆ ಕನ್ನಡದ ಟಚ್ ಕೊಟ್ಟಿ ಜೀ ಕನ್ನಡದಲ್ಲಿ ಪ್ರಸಾರ ಮಾಡುತ್ತಿದ್ದಾರೆ ಸದ್ಯ ಇದಕ್ಕೆ ಅದ್ಭುತವಾದ ರೆಸ್ಪಾನ್ಸ್ ಬಂದಿದ್ದು ವೀಕ್ಷಕರ ಮನಸ್ಸನ್ನು ಗೆದ್ದಿದೆ ಎಂದು ಹೇಳಬಹುದು. ಈ ಧಾರಾವಾಹಿಯಲ್ಲಿ ಸುಧಾರಾಣಿಯವರು ಪಡೆಯುತ್ತಿರುವ ಸಂಭಾವನೆ ಬಗ್ಗೆ ಸೋಶಿಯಲ್ ಮೀಡಿಯಾಗಳಲ್ಲಿ ಗೊಂದಲಗಳು ಹೆಚ್ಚಾಗಿವೆ, ಈ ಬಗ್ಗೆ ಹೇಳುವುದಾದರೆ ಸುಧಾರಾಣಿಯವರು ಒಂದು ಎಪಿಸೋಡಿಗೆ 40,000 ರೂಗಳನ್ನು ಪಡೆಯುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ. ಸದ್ಯ ಶ್ರೀರಸ್ತು ಶುಭಮಸ್ತು, ಧಾರವಾಹಿಯ ಮೂಲಕ ಕಲಾವಿದರು ತಮ್ಮ ಅಭಿಮಾನಿಗಳನ್ನು ಮತ್ತೆ ಮನರಂಜಿಸುತ್ತಿದ್ದಾರೆ ಎಂದು ಹೇಳಿದರೆ ಸುಳ್ಳಲ್ಲಾ.