ಕೊಟ್ಯಾಧಿಪತಿ ಕಾರ್ಯಕ್ರಮದಿಂದ ಪಡೆಯುತ್ತಿದ್ದ ಸಂಭಾವನೆಯನ್ನು ಅಪ್ಪು ಯಾವುದಕ್ಕಾಗಿ ಖರ್ಚು ಮಾಡುತ್ತಿದ್ದರು ಗೊತ್ತಾ.?
ಅಪ್ಪು ದಾನ ಧರ್ಮ ಮಾಡುವುದರಲ್ಲಿ ಎತ್ತಿದ ಕೈ ಎಂದಿಗೂ ಕೂಡ ತಾನು ಮಾಡಿದಂತಹ ದಾನ ಧರ್ಮವನ್ನು ಮತ್ತೊಬ್ಬರೊಟ್ಟಿಗೆ ಹೇಳಿಕೊಳ್ಳುತ್ತಿರಲಿಲ್ಲ. ಅಷ್ಟೇ ಅಲ್ಲದೆ ಸಹಾಯ ಪಡೆದಂತಹ ವ್ಯಕ್ತಿಗೂ ಕೂಡ ನಾನೇ ಇದನ್ನು ಮಾಡಿದ್ದೇನು ಎಂಬುದನ್ನು ಯಾರಿಗೂ ಕೂಡ ಹೇಳಬಾರದು ಎಂಬ ಮಾತನ್ನು ತೆಗೆದುಕೊಳ್ಳುತ್ತಿದ್ದರು. ಒಟ್ಟಾರೆಯಾಗಿ ಹೇಳುವುದಾದರೆ ಬಲಗೈನಲ್ಲಿ ಕೊಟ್ಟಿದ್ದು ಎಡಗೈಗೂ ಕೂಡ ತಿಳಿಯಬಾರದು ಅಂತಹ ವ್ಯಕ್ತಿತ್ವವನ್ನು ಒಳಗೊಂಡಿದ್ದರು. ಇಂತಹ ಒಳ್ಳೆಯ ವ್ಯಕ್ತಿ ಇದ್ದಕ್ಕಿದ್ದ ಹಾಗೆ ನಮ್ಮೆಲ್ಲರನ್ನು ಬಿಟ್ಟು ಹೋದರು ಅಂದರೆ ಆ ದಿನವನ್ನು ಯಾರಿಂದಲೂ ಕೂಡ ಊಹೆ ಮಾಡಿಕೊಳ್ಳುವುದಕ್ಕೆ…